Total Pageviews

Monday 22 April 2013

ಬೆಳ್ಳಿ ಕಾಲೆಜ್ಜೆಗಳು




ಬೆಳ್ಳಿ ಹಿಮದೆದೆಯಲ್ಲಿ
ಬೆಚ್ಚಗಿನ ಪಾದವು ಸೋಕಲು
ಅಚ್ಚಾಯಿತು ಹೆಜ್ಜೆಯ ಗುರುತು
ಮೆಚ್ಚುಗೆಯ ಒಪ್ಪಿಗೆಯಂತೆ.

ಕುಡುಗುಡುವ ಚಳಿಗಾಳಿಯಲಿ
ಹೆಪ್ಪುಗಟ್ಟಿದ ಹಿಮಗಡ್ಡೆಗಳು
ಸಕ್ಕರೆಯ ಮಳೆಯಂತೆ
ಮುತ್ತಂತೆ ಬುವಿಗಿಳಿಯಲು
ಸ್ವರ್ಗ ಅನಿಸಿತು ಧರೆಯು
ದಂಗಾದೆ ಕ್ಷಣದಲ್ಲಿ!!

ಎನಿತು ಸೊಭಗಿನ ಧರಣಿ
ಎಲ್ಲಿ ನೋಡಿದರಲ್ಲಿ ತುಂಬಿ-
ತುಳುಕಿದಂತಿದೆ ಬಿಳಿಮಣಿ
ಮುಂದೆ ಸಾಗವ ಮನಸಲಿ 
ಇನ್ನಷ್ಟು ಮತ್ತಷ್ಟು...
ಬೆರಗುಗಳ ತುಡಿತಗಳು!!?

ಇನ್ನಷ್ಟು ಮುನ್ನಡೆವೆ
ಕಣ್ತುಂಬಿ ಮನತುಂಬಿ
ಸಂತಸದಿ ಕುಣಿದು
ಭೂರಮೆಗೆ ಮಣಿದು
ಆನಂದದಿ ನಾ ಹೇಳ್ವೆ
ನಾ ಮುಂದೆ ಬರುವೆ; ನನ್ನೊಳಗೆ ನಲಿವೆ
ಈ ಜಗವ ಮರೆವೆ..
ಇನ್ನೂ ಅನಿಸುತಿದೆ..

             --  ಮೌನ ವೀಣೆ
...............

ಮಯೂರ ಚಿತ್ರ ಕವನ ಸ್ಪರ್ಧೆಗಾಗಿ ಬರೆದದ್ದು, ಈ ತಿಂಗಳ ಮಯೂರ ಪತ್ರಿಕೆ ಪರೀಕ್ಷಿಸಲಿಲ್ಲ. ಪ್ರಶಸ್ತಿ ಗೆದ್ದಿಲ್ಲ ಅನಿಸತ್ತೆ. ಬಹುಮಾನ ಗೆದ್ದರೆ ಕಳಿಸುತ್ತಿದ್ದರು ಅಲ್ಲವೇ ? :-) ಆದರೆ ನನ್ನ ಬ್ಲಾಗಿನ ಬಂಧುಗಳಿಗಾಗಿ ನನ್ನ ಬ್ಲಾಗಿನಲ್ಲಿ ಪ್ರಕಟಿಸಿದ್ದೇನೆ. ಇದು ನಮ್ಮ ಪ್ರಕಾಶಣ್ಣನವರ ಚಿತ್ರ. ಅವರ ಅದ್ಭುತ ಚಿತ್ರ ಹವ್ಯಾಸಕ್ಕೆ ನನ್ನಕಡೆಯಿಂದ ಜೈ ಹೋ ಧನ್ಯವಾದ

Thursday 4 April 2013

ಬಿಸಿ summerಗೊಂದು belated ಸ್ವಾಗತ




ಆಹಾ!! ಒಂದ್ ಚೊಲೊ ಗಾಳಿ ಬಂತ್ ಜೀವ ಬಂದಂಗ್ ಆಯ್ತಪ್ಪಾ... ಹೂಂ... ಸುಡು ಬೇಸಿಗೆಯ ಝಳ ಶುರುವಾಗುತ್ತಿದೆ. ಊಫ್.. ಊಸ್.. ಅಂತ ಕೈಲೊಮ್ಮೆ, ಸೆರಗಲ್ಲೊಮ್ಮೆ, ಕರ್ಚಿಪಲ್ಲೊಮ್ಮೆ, ಕೈಗೆ ಸಿಕ್ಕ invitations, ರಟ್ಟು-ಪೇಪರಗಳಲ್ಲೊಮ್ಮೆ ಗಾಳಿ ಬೀಸಿಕೊಳ್ಳುತ್ತ..  ವಾತಾವರಣದಲ್ಲಿ ಒಂಚೂರು ತಂಪಿಲ್ಲ ಕಣ್ರೀ.. ಈ KEB ಅವ್ರು ಎಲ್ಲಿ ಹಾಳಾಗಿ ಹೋದ್ರೋ ಏನೋ!!! ಪ್ಯಾನ್ ಹಚ್ಕೊಂಡು ಕುರೋಣ ಅಂದ್ರೆ ಕರೆಂಟ್ ತೆಕ್ಕೊಂಡು ಕಾಡ್ತಾರೆ. ನಮ್ಮ ಮಗಂದು/ಮಗಳಿಂದು exam ನಡೀತಿದೆ. ಪಾಪದ ಕೂಸು ಓದ್ಕೊಬೇಕ್ ಸುಸ್ತ್ ಆಗುತ್ತೆ ಅದಿಕ್ಕೆ ಮೇಲಿಂದ ಲೈಟ್ ಬೇರೆ ತೆಗಿತಾರೆ.. ಹೀಗೆ ಸಾಮಾನ್ಯವಾಗಿ ಸುತ್ತ-ಮುತ್ತ ಕೇಳಿಬರೋ ಮಾತುಗಳು. ಜೊತೆಗೆ ಒಂದಷ್ಟು simpaty. ಬಿಸಿಲಿನ ಬೇಗೆಗೆ ಒಂದ್ ಸ್ವಲ್ಪ ಮೈಬಿಸಿ, exam ಬರ್ಯೊ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಬಿಸಿ, ರಾಜಕೀಯದವರಿಗೆ ಚುನಾವಣೆಯ ಬಿಸಿ, ಒಂದ್ ಹಂತ ಪರೀಕ್ಷೆ ಮುಗಿಸಿಕೊಂಡೋರ್ಗೆ ಟ್ಯೂಶನ್ ಕ್ಲಾಸ್, ಸಮ್ಮರ್ ಕ್ಯಾಂಪಗಳ ಬ್ಯುಸಿ scheduleಗಳ ಬಿಸಿ, ಇನ್ನು work ಮಾಡೋರಿಗೆ ಕೆಲಸದ ಒತ್ತಡದ ಬಿಸಿ ಜೊತೆಗೆ ಮಾರ್ಚ್ end ಮುಗಿತು ಈ ಏಪ್ರಿಲ್ ನಲ್ಲಿ hike ಮಾಡ್ತಾರೋ ಏನೋ ಎಂಬ ಒಂದಸ್ವಲ್ಪ  ತಲೆಬಿಸಿ, ಹೀಗೆ ಅದೂ ಇದು ಅಂತ ವಾತಾವರಣ fulllll  ಬಿಸಿ ಕಣ್ರೀ.. ಒಟ್ನಲ್ಲಿ ಬಿಸಿ start up. Anyway ಈ ಬೇಸಿಗೆಯನ್ನು late ಆದ್ರೂ latest ಆಗಿ ಸ್ವಾಗತಿಸೋಣ..

ಸೆಕೆ ದಿನಗಳ ತಾಪ
ಭರಿಸುತಿದೆ ತೀರದ ಬಾಯಾರಿಕೆಯ
ಆಸೆಪಟ್ಟು ಜೀವ ಬೇಡುತಿದೆ
ತರಾವರಿಯ ಮಿಲ್ಕ್ ಶೇಕುಗಳ
ಗಂಟೆಗೊಮ್ಮೆ ...
ತರಿಸುತಿದೆ ಪ್ಯಾನಿನ ಬಿಸಿಗಾಳಿ
slice maazaಗಳ ನೆನಪ
ಸ್ವಾಗತಿಸುವ ಬೇಸಿಗೆಯ
cold ಕಾಫಿ ಕುಡಿಯುತ್ತ..



Happy Summar...

                                                           --ಮೌನ ವೀಣೆ
ಚಿತ್ರಕ್ರಪೆ - ಅಂತರ್ಜಾಲ

Monday 1 April 2013

ಕನಸಿನ ಮೌನಕ್ಕೊಂದು ಮಾತು ಬಂದಾಗ..











ಮಾತು ಬರದ ಮೌನಕ್ಕೆ ಕನಸಾದ ಬಗೆಯ ಒಂದು ಚಿಕ್ಕ ಕನಸಿನ ಕತೆ. ಹುಚ್ಚುಕೋಡಿಯ ತಲೆಯೊಳಗೆ ಚಿಕ್ಕದೊಂದು ಆಸೆಯ ಭಾವ, ಬಯಸುವ ಮನಸ್ಸಲ್ಲಿ, ನೆನೆಯುತ ಮಲಗಿದಲ್ಲಿ ಬೀಳುವುದು; sometime ಕಾಣೋದು ಅದೇ ಕನಸು, ಭ್ರಮಿಸಿಕೊಳ್ಳೋದು ಅದೇ ಅಂದರೂ ತಪ್ಪಾಗದು. ನಾವು ಎಂತಹ ಮರೆಗುಳಿ ವಂಶದವರೆಂದರೆ ಒಮ್ಮೊಮ್ಮೆ ಒಂದು ವಿಚಾರದ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲು ಹಾಗೆ ಕಣ್ಮುಚ್ಚಿ  ಕುಳಿತು ಧ್ಯಾನಸ್ಥ ಸ್ಥಿತಿ ತಲುಪಿ ಆದರೆ-ಹೋದರೆ ಎಂಬ ಆಗು-ಹೋಗುಗಳ ಹತ್ತು ವಿಚಾರಗಳಲ್ಲಿ ಮುಳುಗಿ ನೈಜ ವಾಸ್ತವದ ವಿಚಾರ ಮರೆತು ಹೊಸದಾಗಿ ಬಂದ ಯೋಚನೆಗಳಿಗೊಂದು ಅಂತ್ಯ ಹಾಡಲು ಉದ್ಯುಕ್ತರಾಗಿ ಬಿಡುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ದಾಸರ ಒಂದು ಹಾಡು ನೆನಪಿಗೆ ಬರುತ್ತದೆ - ಈ ಮಾನವರು ಹೇಳುವುದು ಒಂದು ಮಾಡುವುದು ಇನ್ನೊಂದು ನಂಬೋದು ಹೇಗೆ ಕಾಣೆ ಪದ್ಮಾವತಿ ಪತಿ ತಿರುಪತಿ ಶ್ರೀವೆಂಕಟಚಲಪತಿ.. ಅಂತ.

ಒಮ್ಮೊಮ್ಮೆ ನನ್ನೊಳಗಿನ ಕಿಚ್ಚು ಹುಚ್ಚು ಅನಿಸಿಬಿಡುತ್ತದೆ. ಮನದೊಳಗೆ ಮೂಡಿದ ಭಾವನೆಗಳೂ ಭಾರ ಎನಿಸಿಬಿಡುತ್ತದೆ. ಮಾತಾಡುವ ವಾಚಾಳಿಯ ನಾಲಿಗೆ ಕೂಡ ಹೊರಳಲು ನರಳುತ್ತದೆ ಒಮ್ಮೊಮ್ಮೆ ತಾನಾಗಿ ಶಕ್ತಿ ತುಂಬಲು ಬಂದ ಉಸಿರನೂ ಕೂಡ ಹೊರದಬ್ಬಲು ಕಷ್ಟವೆನಿಸಿಬಿಡುತ್ತದೆ. ಅತ್ತು ಬಿಟ್ಟು  ಈ ತನುವಿನ ಕಷ್ಟ ಕಳೆಯೋಣವೆಂದರೆ ಹಾಳಾದ ಕಣ್ಣಿರು ಕೂಡ strike  ಮಾಡಿಬಿಡುತ್ತದೆ.  ಒಮ್ಮೊಮ್ಮೆ ನಮ್ಮೊಳಗಿನ ನಾನೆಂಬ ಸ್ವಾರ್ಥದ ಸ್ವಾಭಿಮಾನ ಹೆಮ್ಮೆ ಎನಿಸುತ್ತದೆ. ಒಮ್ಮೊಮ್ಮೆ ಸಂಗಾತಿ ಜೊತೆಗಾರನಿಲ್ಲವೆಂದು ಮರುಗುವ ಮನಸ್ಸು ಸುತ್ತಣ ಸಂಸಾರದ ಸಂಘರ್ಷಗಳ ನೋಡಿ single life has great comfort ಎಂದು ಎದೆಯುಬ್ಬಿಸಿ ತನ್ನೊಳಗೆ ಬೀಗಿಬಿಡುತ್ತದೆ. ಒಮ್ಮೊಮ್ಮೆ ಸತ್ಯ ಒಪ್ಪಿಕೊಳ್ಳಲು ಮನಸಾಲಾಗದೆ ಮಿಥ್ಯವೆಂದು ಸಾಧಿಸಿಬಿಡೋಣ ಎಂದೂ ಅನಿಸುವುದುಂಟು. ಒಮ್ಮೊಮ್ಮೆ ತೀರಾ ಚಿಕ್ಕ -ಪುಟ್ಟ ಗೆಲುವಿಗೂ ನಲಿಯುವ ಮನಸ್ಸು ದೊಡ್ಡ ಗೆಲುವಾದರೂ ಅಂತರ್ಮುಖಿಯಾಗಿಬಿಡುತ್ತದೆ. ಒಮ್ಮೊಮ್ಮೆ ಜೀವನ  ಸಹಜ -ಸುಂದರ, ಅದ್ಭುತ!!. ಈ ಸಂಬಂಧ - ಬಾಂಧವ್ಯಗಳು ಎಷ್ಟು ಖುಷಿಯಾಗಿಸುತ್ತಪ್ಪಾ ಎಂದು ಉಬ್ಬಿ ಬಿಡುವ ನಾವುಗಳು; ಒಮ್ಮೊಮ್ಮೆ ತುಂಬಾ ವೇದಾಂತಿ ತತ್ವಜ್ಞಾನಿಯಂತೆ ಏನಿದೆ ಜೀವನದಲ್ಲಿ ಹುಟ್ಟು-ಸಾವುಗಳು ನಡುವಲ್ಲಿ ಸ್ವಲ್ಪದಿನ(ಜಟಕಾಬಂಡಿ) ಒಂದಷ್ಟು ಸ್ವಾರ್ಥ ದುರಾಸೆಗಳ ಜಂಜಾಟದ ಜಗಳಗಳು, ತುತ್ತಿಗಾಗಿ ಒಂದಷ್ಟು ಓದು - ನೌಕರಿ - ಪೆನ್ಷನ್ - ಲೈಫ್ settlement ಹೀಗೆ ಒಂದಷ್ಟು ಬದುಕಿನ ಹೋರಾಟ. ಇಷ್ಟಾದ ಮೇಲೂ ಈ ಜೀವನ ನಶ್ವರ; ಒಮ್ಮೊಮ್ಮೆ ನಾವು ಮನುಷ್ಯರಾಗಿದ್ದೇವೆ, ನಮಗೆ ನಮ್ಮದೇ ಒಂದಷ್ಟು ಸ್ವಾತಂತ್ರ್ಯ, ಮಾತುಗಳು ಬರ್ತಾವೆ, ಹಲವು ಭಾಷೆಗಳಲ್ಲಿ ಬರಿತೇವೆ, ಟೆಕ್ನಾಲಜಿ ಬೆಳೆಸಿದ್ದೇವೆ, ಕಂಪ್ಯೂಟರ್, ಮೊಬೈಲ್, ಉಪಗ್ರಹಗಳು ಅದೂ ಇದೂ ಒಂದಷ್ಟು ಮಣ್ಣು ಮಸಿ ಕಲ್ಪಿಸಿಕೊಂಡು ನಾವು ಲಕ್ಕಿಗಳು, ಬುದ್ದಿಜೀವಿ, ಶ್ರೇಷ್ಟರು ಎಂದು ಬಿರುದು ಕೊಟ್ಟು ಕೊಂಡು ಬಿಡುತ್ತೇವೆ. ಒಮ್ಮೊಮ್ಮೆ ಏನಪ್ಪಾ..??! ನಾವು ಒಂಥರಾ ಅವಲಕ್ಕಿಗಳೇ!! ಎಲ್ಲೆಡೆಯೂ ಸ್ವಾರ್ಥ, ಮೋಸ, ಕಪಟತನ, ಈ
ಹೊಲಸು ಪ್ರಾಣಿಗೆ ಇರುವಷ್ಟು ದುರಾಸೆ ಬೇರಾವ ಜೀವ ಪ್ರಭೇದಗಳಲ್ಲು ಇಲ್ಲವೆಂದೆನಿಸಿ ನಾವೇ ಹುಂಬರು, ಮೂರ್ಖರು ಎಂದೆನಿಸುವುದೂ ಉಂಟು. 

ಆಸೆಗಳು ಆಕಾಶದ ಹಾಗೆ. ಹಿಡಿಯಲಾಗದ ಹೊಳೆಯುವ ಗಂಟು. ಅದಕ್ಕಾಗಿಯೆ ಜನ ಆಕಾಶ ನೋಡಿ ಹತ್ತು ಹಲವು ಕಲ್ಪಿಸಿಕೊಂಡು ಕನಸಿನ ಪುಷ್ಪಕ ಕಟ್ಟುತ್ತಾರೆ. ತಾರೆಗಳ ಜೊತೆ, ಚಂದ್ರನ ಜೊತೆ ಸೇರುವ ಗೆಳೆತನದ ಅನುಭೂತಿಯ ಭಾವ ಹೊಂದುತ್ತಾರೆ. ಕಲ್ಪನೆಯ ಪ್ರೀತಿಸಿ, ಮೋಹಿಸುತ ಆರಾಧಿಸಿ ಕನಸಿನ ಬೃಂಗವ ಏರಿ ಕವಿ ಎನಿಸಿಕೊಂಡುಬಿಡುತ್ತಾರೆ. ರಕ್ತ ಒತ್ತುವ ಹೃದಯದಲ್ಲಿ ರಂಗೋಲಿ ಬರೆದು ಅವರು ಬಯಸುವ ಪ್ರೇಮದ ವಸ್ತುವ ಬರಮಾಡಿ ಕಲ್ಪನೆಯ ಕನಸಲ್ಲಿ ಕಳೆದುಹೋಗುತ್ತಾರೆ. ಅಯ್ಯೋ.. !!!  ಸಾಕಲ್ಲವೇ?? ಎಷ್ಟು ಅಂತ ಕಲ್ಪಿಸಿಕೊಂಡು ಕನಸ್ ಕಾಣೋದ್ ಹೇಳಿ?? ಕೆಲಸವಿಲ್ಲದಿದ್ರೆ ಆಗೋದ್ ಇದೆ ಅಲ್ಲವೇ ?? ಮತ್ತೇನಾಗುತ್ತೆ??


ಹಸಿರಾಗಿರಲಿ ಬದುಕು ಖುಷಿಯಲ್ಲಿ ಕರಗಿ..
ನೂರ್ಮಡಿಸಿ ಚಿಮ್ಮುತಿರಲಿ ಕನಸುಗಳ ಹುಚ್ಚಾಸೆಯ ಅಲೆಗಳು...


ಒಂದು ಪುಟ್ಟ ಆಸೆಯ
ಕನಸು
ಕನಸೊಳಗೆ ಕನಸುಗಳಿಗೆ
ಕಾವ್ ಕೊಟ್ಟು
ಹೊಸದತ್ತು ಕನಸುಗಳ
ಹುಟ್ಟಾಕಿ ಕನಸಲ್ಲಿ
ಆ ಕನಸಲ್ಲಿ ಹೊಸ
ಆಸೆಯ ಕನಸಿನ ಬೀಜ
ತಂತಾನೆ ಮೊಳೆತು ಸಸಿಯಾಗಿ
ಗಳಿಗೆಗಳಿಗೆಗಳೊಳಗೆ ಬೆಳೆಬೆಳೆದು
ಹೆಮ್ಮರವಾಗಿ ಆ ಕನಸೇ
ತನ್ನೊಳಗೆ ತನ್ನ ಕನಸನು
ಬೆಳೆಸುವ ಹುಚ್ಚಾಸೆಯ
ಇನ್ನೊಂದು ಕನಸನು ಕಂಡು
ಕಣ್ತೆರೆವ ಮನಸಿರದೆ
ಕನಸಾಗುತಿರುವಾಗ
ವಾಸ್ತವದ ನೆನಪ ಬರಿಸಿತು
ನನ್ನ ಹಿತ ಬಯಸುವ ಶತ್ರು
ಅಲರಾಂನ ಗಂಟೆ ಹೊಡೆದುಕೊಳ್ಳಬೇಕೆ??!!
ಗಂಟೆ ಏಳಾಯಿತು ಎಂದು
ಪಕ್ಕದ ಮನೆಯ ಆಂಟಿ
ಟ್ಯೂಶನ್ ಗೆ ಮಗನ ಕಳಿಸಿ
ಟಾಟಾ ಮಾಡುವ ಸೌಂಡು ಕಿವಿಗೆ
ಅಪ್ಪಳಿಸಿದಾಗಲೇ ನೆನಪಾದ್ದು
Sunday ಅಲ್ಲ ಇಂದು Monday ಎಂದು
.


HaPPy TiMeS....
         EnJoY ThE SwEeT DrEaMs..